DAKSHINA KANNADA
ಗುಂಡ್ಯ ಹೊಳೆಯಲ್ಲಿ ಸೆಲ್ಫಿ ಹುಚ್ಚಿಗೆ ನೀರು ಪಾಲಾದ ಯುವಕ
ಪುತ್ತೂರು ನವೆಂಬರ್ 10: ಸೆಲ್ಫಿ ಹುಚ್ಚಿಗೆ ಯುವಕನೋಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದಲ್ಲಿ ನಡೆದಿದೆ.
ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಟೆಂಪೋ ವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ ಸೆಲ್ಫೀ ತೆಗೆಯಲು ಮುಂದಾದಾಗ ಈ ದುರ್ಘಟನೆ ಸಂಭವಿಸಿದೆ.
ಸ್ಥಳೀಯ ಸಾರ್ವಜನಿಕರು ನದಿಯಲ್ಲಿ ಹುಡುಕಾಟ ನಡೆಸಿದರು ಯುವಕನ ಪತ್ತೆಯಾಗಿಲ್ಲ.ಈ ಪ್ರದೇಶದಲ್ಲಿ ಅತಿಯಾಗಿ ಕತ್ತಲು ಆವರಿಸಿರುವ ಹಿನ್ನೆಲೆಯಲ್ಲಿ ಮತ್ತು ಈ ಸ್ಥಳವು ಅತ್ಯಂತ ಅಪಾಯಕಾರಿ ಆಗಿರುವ ಕಾರಣದಿಂದಾಗಿ ನದಿಯಲ್ಲಿನ ಹುಡುಕಾಟ ಸದ್ಯ ನಿಲ್ಲಿಸಲಾಗಿದ್ದು,
ನಾಳೆ ಬೆಳಗ್ಗೆ ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಸಲಾಗುವುದು ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಕಾಂಬ್ಲೇ ನೇತೃತ್ವದಲ್ಲಿ ಪೊಲೀಸರ ತಂಡವು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
You must be logged in to post a comment Login