LATEST NEWS
ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ಮಂಗಳೂರು ಜನವರಿ 3: ಮಂಗಳೂರಿನ ಹೊರವಲಯದ ನೇತ್ರಾವತಿ ಸೇತುವೆಯಿಂದ ನದಿಗೆ ದುಮುಕಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನದಿಗೆ ಹಾರಿದ ಯುವಕನನ್ನು ಉಳ್ಳಾಲ ಬೈಲ್ ನಿವಾಸಿ ನವಿಶ್(28) ಎಂದು ಗುರುತಿಸಲಾಗಿದೆ.
ನವೀಶ್ ಶಾಮಿಯಾನ ಕೆಲಸ ಮಾಡಿಕೊಂಡಿದ ಎಂದು ಹೇಳಲಾಗಿದ್ದು, ಈತ ಇಂದು ಬೆಳಿಗ್ಗೆ 6.30ರ ಸುಮಾರಿಗೆ ಬೈಕ್ ನ್ನು ನೇತ್ರಾವತಿ ಬಿಡ್ಜ್ ನಲ್ಲಿ ಇಟ್ಟು ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
You must be logged in to post a comment Login