Connect with us

BANTWAL

ಕೊಡ್ಯಮಲೆಯಲ್ಲಿ ಮಾರಕಾಸ್ತ್ರದಿಂದ ಕಡಿದು ಯುವಕನ ಕೊಲೆ

ಬಂಟ್ವಾಳ, ಸೆಪ್ಟೆಂಬರ್ 13: ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಮಾರಕಾಸ್ತ್ರದಿಂದ ಯುವಕನೋರ್ವನನ್ನು ಕಡಿದು ಕೊಲೆಗೈದ ಘಟನೆ ಇಂದು ನಡೆದಿದೆ.

ಕೊಲೆಯಾದ ಯುವಕನನ್ನು ರಫೀಕ್ (26) ಎಂದು ಗುರುತಿಸಲಾಗಿದೆ. ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *