Connect with us

    DAKSHINA KANNADA

    ಪುತ್ತೂರು – ಸರ್ವೆ ಗೌರಿ ಹೊಳೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಸನ್ಮಿತ್

    ಪುತ್ತೂರಿ ಜುಲೈ 21: .ಯುವಕನೊಬ್ಬ ಸರ್ವೆ ಗೌರಿ ಹೊಳೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಘಟನೆ ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮದ ಸರ್ವೆ ಎಂಬಲ್ಲಿರುವ ರೈಲ್ವೆ ಮೇಲ್ಸೇತುವೆ ಸಮೀಪ ನಡೆದಿದೆ.
    ನಾಪತ್ತೆಯಾದ ಯುವಕನನ್ನು ಪುತ್ತೂರು ನಗರದ ಹೊರವಲಯದ ಮುಕ್ರಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಷೋರೂಂ ಉದ್ಯೋಗಿ, ಕಡಬ ತಾಲ್ಲೂಕಿನ ಕುದ್ಮಾರು ಗ್ರಾಮದ ತೆಕ್ಕಿತ್ತಡ್ಕ ನಿವಾಸಿ ಚಂದ್ರ ಗೌಡ ಅವರ ಪುತ್ರ ಸನ್ಮಿತ್ (21) ಎಂದು ಗುರುತಿಸಲಾಗಿದೆ.


    ಈತ ರೈಲ್ವೆ ಮೇಲ್ಸೇತುವೆ ಸಮೀಪ ರಸ್ತೆ ಬದಿಯ ಪ್ರಯಾಣಿಕರ ತಂಗುದಾಣದ ಪಕ್ಕದಲ್ಲಿ ಸ್ಕೂಟರ್, ಹೆಲ್ಮೆಟ್, ರೈನ್‌ಕೋಟ್‌, ಮೊಬೈಲ್ ಪೋನ್, ಪರ್ಸ್‌, ಟಿಫಿನ್ ಬಾಕ್ಸ್ ಪತ್ತೆಯಾಗಿದ್ದು, ಆತ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸನ್ಮಿತ್ ನಾಪತ್ತೆಯಾಗಿರುವ ಕುರಿತು ಚಂದ್ರ ಗೌಡ ಅವರು ಸಂಪ್ಯ ಠಾಣೆಗೆ ದೂರು ನೀಡಿದ್ದಾರೆ. ಶುಕ್ರವಾರ ಕರ್ತವ್ಯ ನಿರ್ವಹಿಸಿದ್ದ ಅವರು, ತಂದೆಗೆ ಕರೆ ಮಾಡಿ ಮನೆಗೆ ತಲುಪುವಾಗ ರಾತ್ರಿ 10 ಗಂಟೆ ಆಗಬಹುದು ಎಂದು ತಿಳಿಸಿದ್ದರು. ರಾತ್ರಿ 9.30ರ ವೇಳೆ ಚಂದ್ರ ಗೌಡ ಅವರು ಕರೆಮಾಡಿ ವಿಚಾರಿಸಿದಾಗ ಷೋರೂಂನಲ್ಲೇ ಇದ್ದು, ಅರ್ಧ ಗಂಟೆಯೊಳಗೆ ಮನೆಗೆ ತಲುಪುವುದಾಗಿ ತಿಳಿಸಿದ್ದರು. ರಾತ್ರಿ 11 ಗಂಟೆಯಾದರೂ ಪುತ್ರ ಮನೆಗೆ ಬಾರದೆ ಇದ್ದಾಗ ಚಂದ್ರ ಗೌಡ ಅವರು ಸನ್ಮಿತ್‌ಗೆ ಹಲವು ಬಾರಿ ಕರೆ ಮಾಡಿದರೂ ಆತ ಮೊಬೈಲ್ ಕರೆ ಸ್ವೀಕರಿಸಿರಲಿಲ್ಲ. ಬಳಿಕ ಅವರು ಹುಡುಕಾಟ ಆರಂಭಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂಪ್ಯ ಠಾಣೆ ಪೊಲೀಸರು ರಾತ್ರಿ ಪರಿಶೀಲನೆ ನಡೆಸಿದರು.

    ಸಂಪ್ಯ ಠಾಣೆಯ ಎಸ್ಐ ಜಂಬೂರಾಜ್ ಮಹಾಜನ್ ನೇತೃತ್ವದಲ್ಲಿ ಸಂಪ್ಯ ಪೊಲೀಸ್ ಸಿಬ್ಬಂದಿ, ಪುತ್ತೂರು ಅಗ್ನಿಶಾಮಕ ದಳ, ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞರು ಹೊಳೆಯಲ್ಲಿ ಸನ್ಮಿತ್‌ಗಾಗಿ ಸನ್ಮಿತ್ಗಾಗಿ ಹುಡುಕಾಟ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply