LATEST NEWS
ಸೇತುವೆ ಬಳಿ ಬೈಕ್ ಇಟ್ಟು ಯುವಕ ನಾಪತ್ತೆ….!!
ಉಡುಪಿ ಸೆಪ್ಟೆಂಬರ್ 24: ಸೇತುವೆ ಬಳಿ ಬೈಕ್ ಬಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಪಡುಕೆರೆಯ ಪಾಪನಾಸಿನಿ ನದಿ ಸಮೀಪ ನಡೆದಿದೆ.
ನಾಪತ್ತೆಯಾದ ಯುವಕನ್ನು ದಾವಣಗೆರೆ ಮೂಲದ ಶಿವ ಎಂದು ಗುರುತಿಸಲಾಗಿದೆ. ಯುವಕ ಉಡುಪಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಎಂದು ಹೇಳಲಾಗಿದ್ದು, ಪಾಪನಾಸಿನಿ ನದಿಗೆ ಕಟ್ಟಲಾಗಿರುವ ಸೇತುವೆ ಬಳಿ ಬೈಕ್ ಪತ್ತೆಯಾಗಿದ್ದು, ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದ ಯುವಕನಿಗಾಗಿ ಸ್ಥಳೀಯ ಮುಳುಗು ತಜ್ಞರಿಂದ ಶೋಧ ನಡೆಸಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login