Connect with us

    LATEST NEWS

    ಮಂಗಳೂರು : ನಂತೂರು ಬಳಿ ಟ್ಯಾಂಕರ್ ಹರಿದು ಪ್ರಾಣ ಕಳಕೊಂಡ ಸವಾರ..!

    ಮಂಗಳೂರು : ಮಂಗಳೂರು ನಗರದ ನಂತೂರು ಪದವು ಬಳಿ  ಮಂಗಳವಾರ ಬೆಳಗ್ಗೆ  ನಡೆದ  ರಸ್ತೆ ಅಪಘಾತ (accident) ದಲ್ಲಿ ದ್ವಿಚಕ್ರ ಸವಾರನೊಬ್ಬ ದಾರುಣ ಅಂತ್ಯ ಕಂಡಿದ್ದಾನೆ.

    ನಂತೂರು ಪದವು ಬಳಿ ಹೋಗುತ್ತಿದ್ದಾಗ ದ್ವಿಚಕ್ರ ವಾಹನ  ಸವಾರನ ನಿಯಂತ್ರಣ ತಪ್ಪಿ ಸ್ಕೂಟಿ ರಸ್ತೆಗೆ ಉರುಳಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎಂದು  ಹೇಳಲಾಗಿದೆ. ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತ ವ್ಯಕ್ತಿಯಾಗಿದ್ದಾರೆ.  ಅಡ್ಯಾರ್ ಕಣ್ಣೂರಿನಲ್ಲಿ ವಾಚ್ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಶಿವಾನಂದ ಉದ್ಯೋಗದಲ್ಲಿದ್ದು, ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿ ಪ್ರಾಣ ಕಳಕೊಂಡಿದ್ದಾರೆ. ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply