Connect with us

    LATEST NEWS

    ಲಾಕ್ ಡೌನ್ ನಿಂದ ನಿರುದ್ಯೋಗ ಸಮಸ್ಯೆ – ಬಾವಿಗೆ ಹಾರಿ ಆತ್ಮಹತ್ಯೆ ಶರಣಾದ ಯುವಕ

    ಉಡುಪಿ ಜೂನ್ 24:ಲಾಕ್ ಡೌನ್ ನಿಂದಾಗಿ ಉದ್ಯೋಗವಿಲ್ಲದೆ ಮಾನಸಿಕವಾಗಿ ನೊಂದ ಯುವಕನೊಬ್ಬ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆಯ ಇಂದಿರಾನಗರದಲ್ಲಿ ನಡೆದಿದೆ.


    ಮೃತ ವ್ಯಕ್ತಿಯನ್ನು ಇಂದಿರಾನಗರದ ನಿವಾಸಿ ಧನಂಜಯ್ ಎಸ್(36) ಎಂದು ಗುರುತಿಸಲಾಗಿದೆ. ಲಾಕ್ ಡೌನ್ ತುರ್ತು ಸಂದರ್ಭದಲ್ಲಿ ನಿರುದ್ಯೋಗ ಸಮಸ್ಯೆ ಬಳಲುತ್ತಿದ್ದ ಯುವಕನು, ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.


    ಪರೀಕ್ಷೆಗೆ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ಸಹಕರಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply