Connect with us

    LATEST NEWS

    ಉಳ್ಳಾಲದಲ್ಲಿ ನೇಣಿಗೆ ಶರಣಾದ ಯುವಕ, ಕಾರಣ ನಿಗೂಢ..!

    ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಇಲ್ಲಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ.

     

    ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಘಟನಾ ಸ್ಥಳಕ್ಕೆ ಉಳ್ಳಾಲ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. .

     

    Share Information
    Advertisement
    Click to comment

    You must be logged in to post a comment Login

    Leave a Reply