Connect with us

    LATEST NEWS

    ಉಳ್ಳಾಲ – ಸಮುದ್ರಕ್ಕೆ ಹಾರಿದ್ದ ಪ್ರಿಯತಮೆ ರಕ್ಷಣೆಗೆ ಹೋದ ಪ್ರಿಯಕರ ಸಾವು…!!

    ಉಳ್ಳಾಲ ಜನವರಿ 29: ಪ್ರಿಯಕರನಿಗೆ ಮತ್ತೊಬ್ಬಳ ಜೊತೆ ಸಂಬಂಧ ಇದೆ ಎಂದು ಬೇಸರಗೊಂಡ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ರಕ್ಷಿಸಲು ಹೋದ ಪ್ರಿಯಕರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಡೆದಿದ್ದು, ಸಮುದ್ರಕ್ಕೆ ಹಾರಿದ್ದ ಯುವತಿಯನ್ನು ರಕ್ಷಿಸಲಾಗಿದೆ.


    ಮೃತರನ್ನು ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ. ಕೋಟೆಕಾರು ನಿವಾಸಿ ಅಶ್ವಿತ ಫೆರಾವೊ(22)ಆತ್ಮ ಹತ್ಯೆಗೆ ಯತ್ನಿಸಿ ಪಾರಾದ ಯುವತಿ.

    ತ್ರಿಕೋನ ಪ್ರೇಮಕತೆ ಈ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಲಾಯ್ಡ್ ಬೇರೊಂದು ಯುವತಿ ಜೊತೆ ಸಲಿಗೆಯಿಂದ ಇರುವುದನ್ನು ಸಹಿಸದೆ ಅಶ್ವಿತಾ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿದ್ದರೆನ್ನಲಾಗಿದೆ. ಅವರನ್ನು ರಕ್ಷಿಸಲೆಂದು ತಕ್ಷಣ ಲಾಯ್ಡ್ ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ ಅವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಶ್ವಿತಾ ರಕ್ಷಿಸಲ್ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply