LATEST NEWS
ಮಂಗಳೂರು ಪೊಲೀಸ್ ಸಿಬ್ಬಂದಿಯೊಬ್ಬರ ಪುತ್ರನ ಆತ್ಮಹತ್ಯೆ
ಮಂಗಳೂರು ಪೊಲೀಸ್ ಸಿಬ್ಬಂದಿಯೊಬ್ಬರ ಪುತ್ರ ಆತ್ಮಹತ್ಯೆ
ಮಂಗಳೂರು ಜೂನ್ 25: ಪೊಲೀಸ್ ಸಿಬ್ಬಂದಿಯೊಬ್ಬರ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ.
ಮೃತನನ್ನು 28 ವರ್ಷದ ಅಂಕಿತ್ ರಾಣೆ ಎಂದು ಗುರುತಿಸಲಾಗಿದ್ದು, ಈತ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯ ಸಿಬ್ಬಂದಿ ಪದ್ಮಯ್ಯ ರಾಣೆ ಅವರ ಮಗ. ಈತ ಬಲ್ಮಠದಲ್ಲಿ ಸಿಎ ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇಂದು ಕಚೇರಿಯ ಸ್ಟೋರ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
You must be logged in to post a comment Login