LATEST NEWS
ರಾಹುಲ್ ಗಾಂಧಿ ಮೋದಿಗಿಂತ ಒಂದು ಹೆಜ್ಜೆ ಮುಂದೆ – ರಮಾನಾಥ ರೈ
ರಾಹುಲ್ ಗಾಂಧಿ ಮೋದಿಗಿಂತ ಒಂದು ಹೆಜ್ಜೆ ಮುಂದೆ – ರಮಾನಾಥ ರೈ
ಮಂಗಳೂರು ಮಾರ್ಚ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ ಅವರು , ಮುಂಬರುವ ಚುವಾವಣೆಗೆ ಪಕ್ಷದ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರಿಗೆ ಪಕ್ಷ ಯಾವುದೇ ಸ್ಥಾನ, ಜವಾಬ್ದಾರಿ ನೀಡಿದರೂ ಅದಕ್ಕೆ ಬದ್ದರಾಗಿ ಇರುತ್ತೆವೆ ಎಂದು ಅವರು ಹೇಳಿದರು. ಆದರೆ ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದು ಅವರು ಹೇಳಿದರು.
ರಾಹುಲ್ ಗಾಂಧಿ ಕುದ್ರೋಳಿ ದೇವಸ್ಥಾನಕ್ಕೆ ಹೋಗುವ ವ್ಯವಸ್ಥೆ ಮಾಡಿದ್ದು ನಾನೇ ಎಂದು ಹೇಳಿದ ಅವರು ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟರಲ್ಲಿ ಎಂಟು ಸ್ಥಾನ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜನಾಶೀರ್ವಾದ ಸಮಾವೇಶ ಯಶಸ್ವಿಯಾಗಿರುವುದು ಜಿಲ್ಲೆಯಲ್ಲಿ ಜಾತ್ಯಾತೀತ ಶಕ್ತಿಗಳು ಪ್ರಬಲ ಗೊಳ್ಳುತ್ತಿರುವುದರ ಸಂಕೇತ ಎಂದು ಅವರು ತಿಳಿಸಿದರು. ಸಮಾವೇಶದಲ್ಲಿ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಅವರ ಭಾಷಣ ಅದ್ಬುತ ವಾಗಿದ್ದು , ರಾಹುಲ್ ಗಾಂಧಿ ಅವರು ಮೋದಿ ಅವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟರು.
You must be logged in to post a comment Login